38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ.

ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸುವುದರ ಮೂಲಕ‌ ನೇರವೇರಿಸಿ ಬೆಳ್ತಂಗಡಿ ಬೆಳೆಯುತ್ತಿರುವ ನಗರ ಪ್ರದೇಶವಾದ್ದರಿಂದ ಅತ್ಯಂತ ಮೌಲ್ಯಯುತವಾದ ಸಂಸ್ಥೆಯು ಇಲ್ಲಿಗೆ ಬರುತ್ತಿದೆ. ಯಾವುದೇ ಒಂದು ಸಂಸ್ಥೆ ಬೆಳೆಯಬೇಕಾದರೆ ಸಂಸ್ಥೆಯು ಗ್ರಾಹಕರಿಗೆ ಉತ್ತಮ‌ ಸೇವೆ ನೀಡಬೇಕು. ಆ ಮುಖೇನಾ ಸಂಸ್ಥೆ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಿದೆ ಎನ್ನುತ್ತಾ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್ ನಾಯಕ್, ಶ್ರೀರಾಮ ಕಾಂಪ್ಲೆಕ್ಸ್ ಮಾಲಕ ಮುಖೇಶ್ ನಾಯಕ್, ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜ, ಭಾರತ್ ಆಟೋ ಕಾರ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಪವರ್ ಆನ್ ಬ್ಯಾಟರಿ ಮಾಲಕ ಶೀತಲ್ ಜೈನ್, ಬೆಳ್ತಂಗಡಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ.ಆಪರೇಟಿವ್ ಸೊಸೈಟಿ ಮ್ಯಾನೇಜರ್ ಪ್ರಶಾಂತ್ ಹೆಚ್ ಆಚಾರ್ಯ, ರಾಮ್ ಪ್ರಸಾದ್ ಎನ್.ಎಸ್, ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ಅಧಿಕಾರಿಗಳಾದ ರಂಗನಾಥ ಸ್ವಾಮಿ,ಶರಣ್ ಕೆ,ಬಾಲು ಆರ್, ಸೋಹನ್ ಶೆಟ್ಟಿ, ಯೋಗೀಶ್ ಅಮಿನ್, ಅರುಣ್ ಕುಮಾರ್, ಬೆಳ್ತಂಗಡಿ ಬ್ರಾಂಚ್ ಮ್ಯಾನೇಜರ್ ಸುದೀಶ್, ಉಜಿರೆ ಅತಿಯಾಸ್ ಕಂಪೆನಿಯ ಗಣೇಶ್ ಬಂಗೇರ,ಗೋಲ್ಡ್ ಸ್ಮಿತ್ ಬ್ಯಾಂಕಿನ ಮ್ಯಾನೇಜರ್, ಕರ್ನಾಟಕ ಏಜೆನ್ಸಿ, ಕಾಂಚನಾ ಆಟೋಮೋಟಿವ್, ಪಿ.ಎಸ್.ಎನ್ ಮೋಟಾರ್ಸ್ ಮತ್ತು ಸಿಬ್ಬಂದಿಗಳು ಹಾಗೂ ಇತರರು ಆಗಮಿಸಿ ಶುಭಹಾರೈಸಿದರು.

ಆಗಮಿಸಿದ ಅಥಿತಿ ಗಣ್ಯರನ್ನು ಸಂಸ್ಥೆಯ ಸಿಬ್ಬಂದಿ ಅಶ್ವಿನ್ ಸ್ವಾಗತಿಸಿದರು.

Related posts

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya
error: Content is protected !!