22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ.

ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸುವುದರ ಮೂಲಕ‌ ನೇರವೇರಿಸಿ ಬೆಳ್ತಂಗಡಿ ಬೆಳೆಯುತ್ತಿರುವ ನಗರ ಪ್ರದೇಶವಾದ್ದರಿಂದ ಅತ್ಯಂತ ಮೌಲ್ಯಯುತವಾದ ಸಂಸ್ಥೆಯು ಇಲ್ಲಿಗೆ ಬರುತ್ತಿದೆ. ಯಾವುದೇ ಒಂದು ಸಂಸ್ಥೆ ಬೆಳೆಯಬೇಕಾದರೆ ಸಂಸ್ಥೆಯು ಗ್ರಾಹಕರಿಗೆ ಉತ್ತಮ‌ ಸೇವೆ ನೀಡಬೇಕು. ಆ ಮುಖೇನಾ ಸಂಸ್ಥೆ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಿದೆ ಎನ್ನುತ್ತಾ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್ ನಾಯಕ್, ಶ್ರೀರಾಮ ಕಾಂಪ್ಲೆಕ್ಸ್ ಮಾಲಕ ಮುಖೇಶ್ ನಾಯಕ್, ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜ, ಭಾರತ್ ಆಟೋ ಕಾರ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಪವರ್ ಆನ್ ಬ್ಯಾಟರಿ ಮಾಲಕ ಶೀತಲ್ ಜೈನ್, ಬೆಳ್ತಂಗಡಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ.ಆಪರೇಟಿವ್ ಸೊಸೈಟಿ ಮ್ಯಾನೇಜರ್ ಪ್ರಶಾಂತ್ ಹೆಚ್ ಆಚಾರ್ಯ, ರಾಮ್ ಪ್ರಸಾದ್ ಎನ್.ಎಸ್, ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ಅಧಿಕಾರಿಗಳಾದ ರಂಗನಾಥ ಸ್ವಾಮಿ,ಶರಣ್ ಕೆ,ಬಾಲು ಆರ್, ಸೋಹನ್ ಶೆಟ್ಟಿ, ಯೋಗೀಶ್ ಅಮಿನ್, ಅರುಣ್ ಕುಮಾರ್, ಬೆಳ್ತಂಗಡಿ ಬ್ರಾಂಚ್ ಮ್ಯಾನೇಜರ್ ಸುದೀಶ್, ಉಜಿರೆ ಅತಿಯಾಸ್ ಕಂಪೆನಿಯ ಗಣೇಶ್ ಬಂಗೇರ,ಗೋಲ್ಡ್ ಸ್ಮಿತ್ ಬ್ಯಾಂಕಿನ ಮ್ಯಾನೇಜರ್, ಕರ್ನಾಟಕ ಏಜೆನ್ಸಿ, ಕಾಂಚನಾ ಆಟೋಮೋಟಿವ್, ಪಿ.ಎಸ್.ಎನ್ ಮೋಟಾರ್ಸ್ ಮತ್ತು ಸಿಬ್ಬಂದಿಗಳು ಹಾಗೂ ಇತರರು ಆಗಮಿಸಿ ಶುಭಹಾರೈಸಿದರು.

ಆಗಮಿಸಿದ ಅಥಿತಿ ಗಣ್ಯರನ್ನು ಸಂಸ್ಥೆಯ ಸಿಬ್ಬಂದಿ ಅಶ್ವಿನ್ ಸ್ವಾಗತಿಸಿದರು.

Related posts

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!