24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.

ದ.ಕ. ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ ಮುಖ್ಯ ಅತಿಥಿಯಾಗಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮವಾದ ಸಲಹೆಯನ್ನು ನೀಡಿದರು.

ದ.ಕ. ಹಾಲು ಒಕ್ಕೂಟ ಇದರ ಸಹಾಯಕ ವ್ಯವಸ್ಥಾಪಕರಾದ ಡಾ. ಗಣಪತಿ ಇವರು ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ದ.ಕ. ಹಾಲು ಒಕ್ಕೂಟ ಬೆಳ್ತಂಗಡಿ ಇದರ ವಿಸ್ತರಣಾಧಿಕಾರಿಯಾದ ಸುಚಿತ್ರಾರವರು ಹೆಣ್ಣು ಕರು ಸಾಕಾಣಿಕೆ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದಲ್ಲಿ ಅತಿ ಹೆಚ್ಚು ಹಾಲು ಹಾಕಿರುವ ಸದಸ್ಯರನ್ನು ಗುರುತಿಸಿ ಪ್ರಥಮ ಬಹುಮಾನವನ್ನು ರಾಜೀವ್ ಸುವರ್ಣರವರಿಗೆ ಸಂಘದ ಅಧ್ಯಕ್ಷರು ನೀಡಿದರು. ದ್ವಿತೀಯ ಬಹುಮಾನವನ್ನು ರೋಷನ್ ಡಿಸೋಜಾ ಇವರಿಗೆ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಅವರು ನೀಡಿದರು.

ಸಂಘದ ಅಧ್ಯಕ್ಷ ಯಾದವ್ ಕುಲಾಲ್ ರವರು ಸಂಘದ ಏಳಿಗೆಗೆ ಸಹಕಾರ ನೀಡುವಂತೆ ಮತ್ತು ಹಾಲಿನ ಗುಣಮಟ್ಟವನ್ನು ಕಾಪಾಡುವಂತೆ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು.ಸಂಘದ ಕಾರ್ಯದರ್ಶಿಯಾದ ಅರುಣ ಹಾಗೂ ರೇವತಿ ಪ್ರಾರ್ಥಿಸಿದರು.ಸಂಘದ ನಿರ್ದೇಶಕ ಚಾಮರಾಜ ಸೇಮಿತ ವಂದಿಸಿದರು.

Related posts

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya
error: Content is protected !!