27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.

ದ.ಕ. ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ ಮುಖ್ಯ ಅತಿಥಿಯಾಗಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮವಾದ ಸಲಹೆಯನ್ನು ನೀಡಿದರು.

ದ.ಕ. ಹಾಲು ಒಕ್ಕೂಟ ಇದರ ಸಹಾಯಕ ವ್ಯವಸ್ಥಾಪಕರಾದ ಡಾ. ಗಣಪತಿ ಇವರು ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ದ.ಕ. ಹಾಲು ಒಕ್ಕೂಟ ಬೆಳ್ತಂಗಡಿ ಇದರ ವಿಸ್ತರಣಾಧಿಕಾರಿಯಾದ ಸುಚಿತ್ರಾರವರು ಹೆಣ್ಣು ಕರು ಸಾಕಾಣಿಕೆ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದಲ್ಲಿ ಅತಿ ಹೆಚ್ಚು ಹಾಲು ಹಾಕಿರುವ ಸದಸ್ಯರನ್ನು ಗುರುತಿಸಿ ಪ್ರಥಮ ಬಹುಮಾನವನ್ನು ರಾಜೀವ್ ಸುವರ್ಣರವರಿಗೆ ಸಂಘದ ಅಧ್ಯಕ್ಷರು ನೀಡಿದರು. ದ್ವಿತೀಯ ಬಹುಮಾನವನ್ನು ರೋಷನ್ ಡಿಸೋಜಾ ಇವರಿಗೆ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಅವರು ನೀಡಿದರು.

ಸಂಘದ ಅಧ್ಯಕ್ಷ ಯಾದವ್ ಕುಲಾಲ್ ರವರು ಸಂಘದ ಏಳಿಗೆಗೆ ಸಹಕಾರ ನೀಡುವಂತೆ ಮತ್ತು ಹಾಲಿನ ಗುಣಮಟ್ಟವನ್ನು ಕಾಪಾಡುವಂತೆ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು.ಸಂಘದ ಕಾರ್ಯದರ್ಶಿಯಾದ ಅರುಣ ಹಾಗೂ ರೇವತಿ ಪ್ರಾರ್ಥಿಸಿದರು.ಸಂಘದ ನಿರ್ದೇಶಕ ಚಾಮರಾಜ ಸೇಮಿತ ವಂದಿಸಿದರು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya
error: Content is protected !!