July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.

ದ.ಕ. ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ ಮುಖ್ಯ ಅತಿಥಿಯಾಗಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮವಾದ ಸಲಹೆಯನ್ನು ನೀಡಿದರು.

ದ.ಕ. ಹಾಲು ಒಕ್ಕೂಟ ಇದರ ಸಹಾಯಕ ವ್ಯವಸ್ಥಾಪಕರಾದ ಡಾ. ಗಣಪತಿ ಇವರು ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ದ.ಕ. ಹಾಲು ಒಕ್ಕೂಟ ಬೆಳ್ತಂಗಡಿ ಇದರ ವಿಸ್ತರಣಾಧಿಕಾರಿಯಾದ ಸುಚಿತ್ರಾರವರು ಹೆಣ್ಣು ಕರು ಸಾಕಾಣಿಕೆ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದಲ್ಲಿ ಅತಿ ಹೆಚ್ಚು ಹಾಲು ಹಾಕಿರುವ ಸದಸ್ಯರನ್ನು ಗುರುತಿಸಿ ಪ್ರಥಮ ಬಹುಮಾನವನ್ನು ರಾಜೀವ್ ಸುವರ್ಣರವರಿಗೆ ಸಂಘದ ಅಧ್ಯಕ್ಷರು ನೀಡಿದರು. ದ್ವಿತೀಯ ಬಹುಮಾನವನ್ನು ರೋಷನ್ ಡಿಸೋಜಾ ಇವರಿಗೆ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಅವರು ನೀಡಿದರು.

ಸಂಘದ ಅಧ್ಯಕ್ಷ ಯಾದವ್ ಕುಲಾಲ್ ರವರು ಸಂಘದ ಏಳಿಗೆಗೆ ಸಹಕಾರ ನೀಡುವಂತೆ ಮತ್ತು ಹಾಲಿನ ಗುಣಮಟ್ಟವನ್ನು ಕಾಪಾಡುವಂತೆ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು.ಸಂಘದ ಕಾರ್ಯದರ್ಶಿಯಾದ ಅರುಣ ಹಾಗೂ ರೇವತಿ ಪ್ರಾರ್ಥಿಸಿದರು.ಸಂಘದ ನಿರ್ದೇಶಕ ಚಾಮರಾಜ ಸೇಮಿತ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
error: Content is protected !!