26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.

ದ.ಕ. ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ ಮುಖ್ಯ ಅತಿಥಿಯಾಗಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮವಾದ ಸಲಹೆಯನ್ನು ನೀಡಿದರು.

ದ.ಕ. ಹಾಲು ಒಕ್ಕೂಟ ಇದರ ಸಹಾಯಕ ವ್ಯವಸ್ಥಾಪಕರಾದ ಡಾ. ಗಣಪತಿ ಇವರು ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ದ.ಕ. ಹಾಲು ಒಕ್ಕೂಟ ಬೆಳ್ತಂಗಡಿ ಇದರ ವಿಸ್ತರಣಾಧಿಕಾರಿಯಾದ ಸುಚಿತ್ರಾರವರು ಹೆಣ್ಣು ಕರು ಸಾಕಾಣಿಕೆ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದಲ್ಲಿ ಅತಿ ಹೆಚ್ಚು ಹಾಲು ಹಾಕಿರುವ ಸದಸ್ಯರನ್ನು ಗುರುತಿಸಿ ಪ್ರಥಮ ಬಹುಮಾನವನ್ನು ರಾಜೀವ್ ಸುವರ್ಣರವರಿಗೆ ಸಂಘದ ಅಧ್ಯಕ್ಷರು ನೀಡಿದರು. ದ್ವಿತೀಯ ಬಹುಮಾನವನ್ನು ರೋಷನ್ ಡಿಸೋಜಾ ಇವರಿಗೆ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಅವರು ನೀಡಿದರು.

ಸಂಘದ ಅಧ್ಯಕ್ಷ ಯಾದವ್ ಕುಲಾಲ್ ರವರು ಸಂಘದ ಏಳಿಗೆಗೆ ಸಹಕಾರ ನೀಡುವಂತೆ ಮತ್ತು ಹಾಲಿನ ಗುಣಮಟ್ಟವನ್ನು ಕಾಪಾಡುವಂತೆ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು.ಸಂಘದ ಕಾರ್ಯದರ್ಶಿಯಾದ ಅರುಣ ಹಾಗೂ ರೇವತಿ ಪ್ರಾರ್ಥಿಸಿದರು.ಸಂಘದ ನಿರ್ದೇಶಕ ಚಾಮರಾಜ ಸೇಮಿತ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!