23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.

ದ.ಕ. ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ ಮುಖ್ಯ ಅತಿಥಿಯಾಗಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮವಾದ ಸಲಹೆಯನ್ನು ನೀಡಿದರು.

ದ.ಕ. ಹಾಲು ಒಕ್ಕೂಟ ಇದರ ಸಹಾಯಕ ವ್ಯವಸ್ಥಾಪಕರಾದ ಡಾ. ಗಣಪತಿ ಇವರು ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ದ.ಕ. ಹಾಲು ಒಕ್ಕೂಟ ಬೆಳ್ತಂಗಡಿ ಇದರ ವಿಸ್ತರಣಾಧಿಕಾರಿಯಾದ ಸುಚಿತ್ರಾರವರು ಹೆಣ್ಣು ಕರು ಸಾಕಾಣಿಕೆ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದಲ್ಲಿ ಅತಿ ಹೆಚ್ಚು ಹಾಲು ಹಾಕಿರುವ ಸದಸ್ಯರನ್ನು ಗುರುತಿಸಿ ಪ್ರಥಮ ಬಹುಮಾನವನ್ನು ರಾಜೀವ್ ಸುವರ್ಣರವರಿಗೆ ಸಂಘದ ಅಧ್ಯಕ್ಷರು ನೀಡಿದರು. ದ್ವಿತೀಯ ಬಹುಮಾನವನ್ನು ರೋಷನ್ ಡಿಸೋಜಾ ಇವರಿಗೆ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಅವರು ನೀಡಿದರು.

ಸಂಘದ ಅಧ್ಯಕ್ಷ ಯಾದವ್ ಕುಲಾಲ್ ರವರು ಸಂಘದ ಏಳಿಗೆಗೆ ಸಹಕಾರ ನೀಡುವಂತೆ ಮತ್ತು ಹಾಲಿನ ಗುಣಮಟ್ಟವನ್ನು ಕಾಪಾಡುವಂತೆ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು.ಸಂಘದ ಕಾರ್ಯದರ್ಶಿಯಾದ ಅರುಣ ಹಾಗೂ ರೇವತಿ ಪ್ರಾರ್ಥಿಸಿದರು.ಸಂಘದ ನಿರ್ದೇಶಕ ಚಾಮರಾಜ ಸೇಮಿತ ವಂದಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya
error: Content is protected !!