ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಬೆಳ್ತಂಗಡಿ: ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯು ಜು.14 ರಂದು ಸಂಘದ ಅಧ್ಯಕ್ಷರಾದ ಯಾದವ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು.

ದ.ಕ. ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ ಮುಖ್ಯ ಅತಿಥಿಯಾಗಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮವಾದ ಸಲಹೆಯನ್ನು ನೀಡಿದರು.

ದ.ಕ. ಹಾಲು ಒಕ್ಕೂಟ ಇದರ ಸಹಾಯಕ ವ್ಯವಸ್ಥಾಪಕರಾದ ಡಾ. ಗಣಪತಿ ಇವರು ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ದ.ಕ. ಹಾಲು ಒಕ್ಕೂಟ ಬೆಳ್ತಂಗಡಿ ಇದರ ವಿಸ್ತರಣಾಧಿಕಾರಿಯಾದ ಸುಚಿತ್ರಾರವರು ಹೆಣ್ಣು ಕರು ಸಾಕಾಣಿಕೆ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಘದಲ್ಲಿ ಅತಿ ಹೆಚ್ಚು ಹಾಲು ಹಾಕಿರುವ ಸದಸ್ಯರನ್ನು ಗುರುತಿಸಿ ಪ್ರಥಮ ಬಹುಮಾನವನ್ನು ರಾಜೀವ್ ಸುವರ್ಣರವರಿಗೆ ಸಂಘದ ಅಧ್ಯಕ್ಷರು ನೀಡಿದರು. ದ್ವಿತೀಯ ಬಹುಮಾನವನ್ನು ರೋಷನ್ ಡಿಸೋಜಾ ಇವರಿಗೆ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಅವರು ನೀಡಿದರು.

ಸಂಘದ ಅಧ್ಯಕ್ಷ ಯಾದವ್ ಕುಲಾಲ್ ರವರು ಸಂಘದ ಏಳಿಗೆಗೆ ಸಹಕಾರ ನೀಡುವಂತೆ ಮತ್ತು ಹಾಲಿನ ಗುಣಮಟ್ಟವನ್ನು ಕಾಪಾಡುವಂತೆ ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಸ್ವಾಗತಿಸಿದರು.ಸಂಘದ ಕಾರ್ಯದರ್ಶಿಯಾದ ಅರುಣ ಹಾಗೂ ರೇವತಿ ಪ್ರಾರ್ಥಿಸಿದರು.ಸಂಘದ ನಿರ್ದೇಶಕ ಚಾಮರಾಜ ಸೇಮಿತ ವಂದಿಸಿದರು.

Related posts

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya
error: Content is protected !!