25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

ನೆರಿಯ: ತಾಲೂಕಿನ ನೆರಿಯ ಗ್ರಾಮದಲ್ಲಿ ಹಿಂದೂ ರುದ್ರಭೂಮಿ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಮೃತ ದೇಹವನ್ನು ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಹಿಂದೂ ರುದ್ರಭೂಮಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಈವರೆಗೆ ಗ್ರಾಮಸ್ಥರ ಮನವಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು ನೆರಿಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜು 14 ರಂದು ಜನತಾ ಕಾಲನಿ ನಿವಾಸಿಯೊಬ್ಬರು ಮೃತಪಟ್ಟಿದ್ದು ಅವರ ಮೃತ ದೇಹವನ್ನು ಪಂಚಾಯತ್ ಎದುರು ಇಟ್ಟು ಪ್ರತಿಭಟನೆಗೆ ಊರವರು ಮುಂದಾಗಿದ್ದಾರೆ. ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಅವರ ಅಂತ್ಯ ಸಂಸ್ಕಾರವನ್ನು ನೆರಿಯ ಗ್ರಾಮ ಪಂಚಾಯತ್ ಎದುರೇ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

ಮೃತರ ಮನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಅಧಿಕಾರಿಗಳು ಬಂದು ಗ್ರಾಮಸ್ಥರ ಮನವೊಲಿಸಿದರೂ ಇಷ್ಟು ವರ್ಷ ಬೇಡಿಕೆ ಈಡೇರಿಲ್ಲ ಹಿಂದೂ ರುದ್ರಭೂಮಿ ಆಗುವ ತನಕ ಪಂಚಾಯತ್ ಗೆ ಬೀಗ ಹಾಕಿ ಎಂದು ತರಾಟೆಗೆ ತಗೊಂಡಿದ್ದಾರೆ.

ಬೆಳ್ತಂಗಡಿ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಇಂದೇ ಹಿಂದು ರುದ್ರಭೂಮಿಗೆ ಸ್ಥಳ ನಿಗದಿಪಡಿಸಬೇಕು. ಒಂದು ವೇಳೆ ಇವತ್ತೂ ಕೂಡ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಪಂಚಾಯತ್ ಎದುರು ಅಂತ್ಯ ಸಂಸ್ಕಾರವನ್ನು ಮಾಡುತ್ತೇವೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

Related posts

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya
error: Content is protected !!