22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

ಹೊಸಂಗಡಿ: ಇಲ್ಲಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ಜು.13 ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹರೇಕಳ ಹಾಜಬ್ಬ, ಊರಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಊರಿಗೆ ಶಾಲೆ ತರಲು ಪ್ರಯತ್ನಿಸಿದೆ. ನನ್ನ ಸಂಕಲ್ಪಕ್ಕೆ ಜನಪ್ರತಿನಿಧಿಗಳು, ದಾನಿಗಳು, ಶಿಕ್ಷಣ ಪ್ರೇಮಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಬೆಂಬಲ ನೀಡಿದರು ಎಂದರು.
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೇಶದ ಉನ್ನತ ಸಾಧಕರಾಗಿ ಹೊರಹೊಮ್ಮಬೇಕು. ಆಗ ಪೋಷಕರು, ಗುರುಗಳ ಶ್ರಮ ಸಾರ್ಥಕವಾಗುತ್ತದೆ ಎಂದು ಹರೇಕಳ ಹಾಜಬ್ಬ ಹೇಳಿದರು.

ಗೌರವ ಅತಿಥಿಯಾಗಿ ಎನ್.ಟಿ ಬಾಳೆಪುಣಿ ಹಿರಿಯ ಪತ್ರಕರ್ತರು ಹೊಸದಿಂಗತ ದಿನ ಪತ್ರಿಕೆ, ಮಂಗಳೂರು. ಇವರು ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇವರ ಸಾಧನೆ ಮತ್ತು ಕಿರು ಪರಿಚಯವನ್ನು ಮಾಡಿದರು.

ವಿದ್ಯಾರ್ಥಿಗಳ ವಿವಿಧ ಸಂಘಗಳನ್ನು ಶಾಲೆಯ ಹಿತೈಷಿಗಳಾದ ಸೀತಾರಾಮ ರೈ ಉದ್ಘಾಟಿಸಿದರು. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ವತಿಯಿಂದ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಜಬ್ಬರ ಜೊತೆಯಲ್ಲಿ ಸಂವಾದ ನಡೆಸಿದರು. ಶಾಲೆಯ ಹಿತೈಷಿ ಖಾಲಿದ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಪ್ರಮಾಣ ವಚನ ಬೋಧಿಸಿದರು. ಶಿಕ್ಷಕಿ ಶ್ರೀಮತಿ ವಿದ್ಯಾಲತಾ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.


ಶಿಕ್ಷಕಿ ಅನಿತಾ ಸ್ವಾಗತಿಸಿದರು. ಶಿಕ್ಷಕಿ ನಯನಾ ವಂದಿಸಿದರು. ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!