September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ಶ್ರೀನಿವಾಸ ಅಸ್ರಣ್ಣರ ವೈದಿಕ ನೇತೃತ್ವದಲ್ಲಿ ಶ್ರೀಧರ್ಮರಸು ಪರಿವಾರ ಶಕ್ತಿಗಳ ದೈವಸ್ಥಾನದ ದಾರಂದ ಮಹೂರ್ತ ನೆರವೇರಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯಸ್ಥರಾದ ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ, ಗಣೇಶ್ ಪೂಜಾರಿ ಬೋಂಟ್ರೋಟ್ಟು ಗುತ್ತು ಹಾಗೂ ಟ್ರಸ್ಟ್ ನ ಪ್ರದಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ,ಕೋಶಾಧಿಕಾರಿಗಳಾದ ಪ್ರವೀಣ್ ಕುಮಾರ್ ಎಚ್.ಎಸ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಸದಾನಂದ ಸಾಲಿಯಾನ್ ಬಳಂಜ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ಧಡ್ಕ, ರಮಾನಾಥ ಶೆಟ್ಟಿ ಪಂಬಾಜೆ,ಹರೀಶ್ ರೈ ಅಶೋಕ್ ಮುಡಾಯಿಬೆಟ್ಟು ಹಾಗೂ ಗುತ್ತು ಗುರಿಕಾರರು, ಅಭಿವೃದ್ಧಿ ಸಮಿತಿಯ ಸದಸ್ಯರು, ಬೋಂಟ್ರೊಟ್ಟು ಗುತ್ತು ಮನೆತನದ ಕೂಡು ಕುಟುಂಬಸ್ಥರು ಊರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೈವಸ್ಥಾನಗಳ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ನೇಮೋತ್ಸವ ನಡೆಯಲಿದ್ದು ದಾನಿಗಳು ಹಾಗೂ ಊರಿನ ಭಕ್ತಾಧಿಗಳು ಪೂರ್ಣ ರೀತಿಯ ಸಹಕಾರವನ್ನು ನೀಡಬೇಕೆಂದು ಸಮಿತಿಯವರು ವಿನಂತಿಸಿದ್ದಾರೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!