25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ಶ್ರೀನಿವಾಸ ಅಸ್ರಣ್ಣರ ವೈದಿಕ ನೇತೃತ್ವದಲ್ಲಿ ಶ್ರೀಧರ್ಮರಸು ಪರಿವಾರ ಶಕ್ತಿಗಳ ದೈವಸ್ಥಾನದ ದಾರಂದ ಮಹೂರ್ತ ನೆರವೇರಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯಸ್ಥರಾದ ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ, ಗಣೇಶ್ ಪೂಜಾರಿ ಬೋಂಟ್ರೋಟ್ಟು ಗುತ್ತು ಹಾಗೂ ಟ್ರಸ್ಟ್ ನ ಪ್ರದಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ,ಕೋಶಾಧಿಕಾರಿಗಳಾದ ಪ್ರವೀಣ್ ಕುಮಾರ್ ಎಚ್.ಎಸ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಸದಾನಂದ ಸಾಲಿಯಾನ್ ಬಳಂಜ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ಧಡ್ಕ, ರಮಾನಾಥ ಶೆಟ್ಟಿ ಪಂಬಾಜೆ,ಹರೀಶ್ ರೈ ಅಶೋಕ್ ಮುಡಾಯಿಬೆಟ್ಟು ಹಾಗೂ ಗುತ್ತು ಗುರಿಕಾರರು, ಅಭಿವೃದ್ಧಿ ಸಮಿತಿಯ ಸದಸ್ಯರು, ಬೋಂಟ್ರೊಟ್ಟು ಗುತ್ತು ಮನೆತನದ ಕೂಡು ಕುಟುಂಬಸ್ಥರು ಊರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೈವಸ್ಥಾನಗಳ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ನೇಮೋತ್ಸವ ನಡೆಯಲಿದ್ದು ದಾನಿಗಳು ಹಾಗೂ ಊರಿನ ಭಕ್ತಾಧಿಗಳು ಪೂರ್ಣ ರೀತಿಯ ಸಹಕಾರವನ್ನು ನೀಡಬೇಕೆಂದು ಸಮಿತಿಯವರು ವಿನಂತಿಸಿದ್ದಾರೆ.

Related posts

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!