30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ಶ್ರೀನಿವಾಸ ಅಸ್ರಣ್ಣರ ವೈದಿಕ ನೇತೃತ್ವದಲ್ಲಿ ಶ್ರೀಧರ್ಮರಸು ಪರಿವಾರ ಶಕ್ತಿಗಳ ದೈವಸ್ಥಾನದ ದಾರಂದ ಮಹೂರ್ತ ನೆರವೇರಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯಸ್ಥರಾದ ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ, ಗಣೇಶ್ ಪೂಜಾರಿ ಬೋಂಟ್ರೋಟ್ಟು ಗುತ್ತು ಹಾಗೂ ಟ್ರಸ್ಟ್ ನ ಪ್ರದಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ,ಕೋಶಾಧಿಕಾರಿಗಳಾದ ಪ್ರವೀಣ್ ಕುಮಾರ್ ಎಚ್.ಎಸ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಸದಾನಂದ ಸಾಲಿಯಾನ್ ಬಳಂಜ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ಧಡ್ಕ, ರಮಾನಾಥ ಶೆಟ್ಟಿ ಪಂಬಾಜೆ,ಹರೀಶ್ ರೈ ಅಶೋಕ್ ಮುಡಾಯಿಬೆಟ್ಟು ಹಾಗೂ ಗುತ್ತು ಗುರಿಕಾರರು, ಅಭಿವೃದ್ಧಿ ಸಮಿತಿಯ ಸದಸ್ಯರು, ಬೋಂಟ್ರೊಟ್ಟು ಗುತ್ತು ಮನೆತನದ ಕೂಡು ಕುಟುಂಬಸ್ಥರು ಊರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೈವಸ್ಥಾನಗಳ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ನೇಮೋತ್ಸವ ನಡೆಯಲಿದ್ದು ದಾನಿಗಳು ಹಾಗೂ ಊರಿನ ಭಕ್ತಾಧಿಗಳು ಪೂರ್ಣ ರೀತಿಯ ಸಹಕಾರವನ್ನು ನೀಡಬೇಕೆಂದು ಸಮಿತಿಯವರು ವಿನಂತಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!