38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ವಿ.ಭಟ್‌ ಹಳ್ಳಿಂಗೇರಿ ಇವರನ್ನು ಆರಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾಗಿ ಜಯಂತ ಗೌಡ ಅಡೀಲು ಮತ್ತು ಕಾರ್ಯದರ್ಶಿಯಾಗಿ ಹರಿಪ್ರಸಾದ್ ಕೆ ಇವರನ್ನು ಆಯ್ಕೆಮಾಡಲಾಯಿತು.

ಸಭೆಯಲ್ಲಿ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರಾ ಗುರುಪ್ರಸಾದ್, ಪಂಚಾಯತ್ ಸದಸ್ಯರುಗಳಾದ ಪುರುಷೋತ್ತಮ, ಪ್ರಭಾಕರ ಗೌಡ, ಶ್ರೀಮತಿ ವನಿತಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವಿಸ್ತರಣಾಧಿಕರಿಯವರಾದ ರಾಜೇಶ್ ಕಾಮತ್ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು .ಸಂಘದ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಸುಂದರಿ ವಂದಿಸಿದರು.

Related posts

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!