25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ವಿ.ಭಟ್‌ ಹಳ್ಳಿಂಗೇರಿ ಇವರನ್ನು ಆರಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾಗಿ ಜಯಂತ ಗೌಡ ಅಡೀಲು ಮತ್ತು ಕಾರ್ಯದರ್ಶಿಯಾಗಿ ಹರಿಪ್ರಸಾದ್ ಕೆ ಇವರನ್ನು ಆಯ್ಕೆಮಾಡಲಾಯಿತು.

ಸಭೆಯಲ್ಲಿ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರಾ ಗುರುಪ್ರಸಾದ್, ಪಂಚಾಯತ್ ಸದಸ್ಯರುಗಳಾದ ಪುರುಷೋತ್ತಮ, ಪ್ರಭಾಕರ ಗೌಡ, ಶ್ರೀಮತಿ ವನಿತಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವಿಸ್ತರಣಾಧಿಕರಿಯವರಾದ ರಾಜೇಶ್ ಕಾಮತ್ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು .ಸಂಘದ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಸುಂದರಿ ವಂದಿಸಿದರು.

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya
error: Content is protected !!