July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ವಿ.ಭಟ್‌ ಹಳ್ಳಿಂಗೇರಿ ಇವರನ್ನು ಆರಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ರಾಮಣ್ಣ ಗೌಡ ಕೇಚೋಡಿ, ಉಪಾಧ್ಯಕ್ಷರಾಗಿ ಜಯಂತ ಗೌಡ ಅಡೀಲು ಮತ್ತು ಕಾರ್ಯದರ್ಶಿಯಾಗಿ ಹರಿಪ್ರಸಾದ್ ಕೆ ಇವರನ್ನು ಆಯ್ಕೆಮಾಡಲಾಯಿತು.

ಸಭೆಯಲ್ಲಿ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರಾ ಗುರುಪ್ರಸಾದ್, ಪಂಚಾಯತ್ ಸದಸ್ಯರುಗಳಾದ ಪುರುಷೋತ್ತಮ, ಪ್ರಭಾಕರ ಗೌಡ, ಶ್ರೀಮತಿ ವನಿತಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವಿಸ್ತರಣಾಧಿಕರಿಯವರಾದ ರಾಜೇಶ್ ಕಾಮತ್ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು .ಸಂಘದ ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ಸ್ವಾಗತಿಸಿದರು. ಶ್ರೀಮತಿ ಸುಂದರಿ ವಂದಿಸಿದರು.

Related posts

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
error: Content is protected !!