22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ಶ್ರೀನಿವಾಸ ಅಸ್ರಣ್ಣರ ವೈದಿಕ ನೇತೃತ್ವದಲ್ಲಿ ಶ್ರೀಧರ್ಮರಸು ಪರಿವಾರ ಶಕ್ತಿಗಳ ದೈವಸ್ಥಾನದ ದಾರಂದ ಮಹೂರ್ತ ನೆರವೇರಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯಸ್ಥರಾದ ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ,ಸದಾನಂದ ಪೂಜಾರಿ, ಗಣೇಶ್ ಪೂಜಾರಿ ಬೋಂಟ್ರೋಟ್ಟು ಗುತ್ತು ಹಾಗೂ ಟ್ರಸ್ಟ್ ನ ಪ್ರದಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ,ಕೋಶಾಧಿಕಾರಿಗಳಾದ ಪ್ರವೀಣ್ ಕುಮಾರ್ ಎಚ್.ಎಸ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಸದಾನಂದ ಸಾಲಿಯಾನ್ ಬಳಂಜ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ಧಡ್ಕ, ರಮಾನಾಥ ಶೆಟ್ಟಿ ಪಂಬಾಜೆ,ಹರೀಶ್ ರೈ ಅಶೋಕ್ ಮುಡಾಯಿಬೆಟ್ಟು ಹಾಗೂ ಗುತ್ತು ಗುರಿಕಾರರು, ಅಭಿವೃದ್ಧಿ ಸಮಿತಿಯ ಸದಸ್ಯರು, ಬೋಂಟ್ರೊಟ್ಟು ಗುತ್ತು ಮನೆತನದ ಕೂಡು ಕುಟುಂಬಸ್ಥರು ಊರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೈವಸ್ಥಾನಗಳ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ನೇಮೋತ್ಸವ ನಡೆಯಲಿದ್ದು ದಾನಿಗಳು ಹಾಗೂ ಊರಿನ ಭಕ್ತಾಧಿಗಳು ಪೂರ್ಣ ರೀತಿಯ ಸಹಕಾರವನ್ನು ನೀಡಬೇಕೆಂದು ಸಮಿತಿಯವರು ವಿನಂತಿಸಿದ್ದಾರೆ.

Related posts

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya
error: Content is protected !!