23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬಂದಾರು : ಗ್ರಾಮ ಪಂಚಾಯತ್ ಬಂದಾರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ ) ಮಂಗಳೂರು ದ.ಕ, ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು-ಉಡುಪಿ -ಸುಳ್ಯ. ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು, ದ.ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಣಿಯೂರು ವಲಯ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಬಂದಾರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು ದ.ಕ, ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ, ಶ್ರೀದೇವಿ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಬಂದಾರು, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗ್ರಾ. ಪಂ.ಬಂದಾರು, ಮತ್ತು ಯಶಸ್ವೀ ನಾಗರಿಕರ ಸೇವಾ ಕೇಂದ್ರ ಸಂಘ ವಾಸುದೇವನಗರ ಕಾರ್ಕಳ ಉಡುಪಿ ಇದರ ಜಂಟಿ ಆಶ್ರಯದಲ್ಲಿ ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ ಯೋಜನೆಯಡಿಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ 13 ನೇ ಸರಣಿ ಕಾರ್ಯಕ್ರಮ ಬಂದಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ನೇತ್ರ ಸಮಸ್ಯೆ ಇರುವ ರೋಗಿಗಳು ಇಂತಹ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಹಾಗೂ ಈ ಕಾರ್ಯಕ್ರಮ ಸಂಯೋಜನೆ ಮಾಡಿದ ವಿವಿಧ ಸಂಘಟನೆಗಳಿಗೆ ಅಭಿನಂದನೆಗಳು ಸಲ್ಲಿಸಿ, ಶುಭಹಾರೈಸಿದರು. ಶಿಬಿರದ ನಿರ್ದೇಶಕರು, ಕಾರ್ಯಕ್ರಮದ ಸಂಯೋಜಕರು ಮುರಳಿಧರ ಭಟ್, ಮಂಗಳೂರು ಪ್ರಸಾದ್ ನೇತ್ರಾಲಯದ ನಿಶ್ಚಿತ್ ಶೆಟ್ಟಿ (ಪಿ.ಆರ್.ಓ) ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬoದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಸದಸ್ಯರಾದ ದಿನೇಶ್ ಗೌಡ ಖಂಡಿಗ, ಬಾಲಕೃಷ್ಣ ಗೌಡ ಮುಗೇರಡ್ಕ, ಶ್ರೀಮತಿ ಪುಷ್ಪಾವತಿ ಬಂದಾರು, ಶ್ರೀಮತಿ ವಿಮಲ ತಾರಿದಡಿ , ಶ್ರೀಮತಿ ಅನಿತಾ ಕುರುಡoಗೆ, ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಪ್ರಸಾದ್ ನೇತ್ರಾಲಯ ಮಂಗಳೂರು ಇದರ ವೈದ್ಯಾಧಿಕಾರಿ ಡಾ|ಅಹನಾ ಫಾತಿಮಾ ಮತ್ತು ತಂಡ, ಬಂದಾರು ಉಪಕೇಂದ್ರದ ಸಿ.ಎಚ್.ಓ ಜಗದೀಶ್, ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ್ ಬಂದಾರು ಸೇವಾಪ್ರತಿನಿಧಿ ನಿರಂಜನ್ ಗೌಡ, ಮೊಗ್ರು ಸೇವಾಪ್ರತಿನಿಧಿ ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು.

ಬಂದಾರು, ಮೊಗ್ರು ಗ್ರಾಮದ ಆಶಾಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿ, ಗ್ರಂಥಾಲಯ ಸಿಬ್ಬಂದಿ ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ನೇತ್ರ ಸಮಸ್ಯೆ ಇರುವ ರೋಗಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಅಮೃತ ಆರೋಗ್ಯ ತಪಾಸಣೆಯನ್ನು ಕೂಡ ನಡೆಸಲಾಯಿತು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!