22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

ಚಾರ್ಮಾಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.

ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ ಸುಲ್ತಾನ್ ಎಂಬ ಹೆಸರಿನ ಲಾರಿಯೊಂದನ್ನು ನಿಲ್ಲಿಸಿ ತಪಾಸಣೆ ಮಾಡುವಾಗ ಅದರಲ್ಲಿ ಯಾವುದೇ ಸರಕಾರಕ್ಕೆ ಉಪ ಖನಜ ಪಾವತಿ ಮಾಡದೆ ಪರವಾನಿಗೆ ಪಡೆಯದೆ ಅಕ್ರಮ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಲಾರಿ ಚಾಲಕ ಅನ್ಸರ್ ಎಂಬಾತನಲ್ಲಿ ಮರಳು ಸಾಗಾಟದ ಪರವಾನಿಗೆ ಹಾಗೂ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳಿಲ್ಲ ಎಂದಿದ್ದು ಅದರಂತೆ ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು ಮುಂದಿನ ಕ್ರಮಕ್ಕಾಗಿ ಗಣಿ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.
ತಪಾಸಣೆ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ, ಸಿಬ್ಬಂದಿಯಾದ ಪ್ರಶಾಂತ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya
error: Content is protected !!