September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

ಚಾರ್ಮಾಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.

ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ ಸುಲ್ತಾನ್ ಎಂಬ ಹೆಸರಿನ ಲಾರಿಯೊಂದನ್ನು ನಿಲ್ಲಿಸಿ ತಪಾಸಣೆ ಮಾಡುವಾಗ ಅದರಲ್ಲಿ ಯಾವುದೇ ಸರಕಾರಕ್ಕೆ ಉಪ ಖನಜ ಪಾವತಿ ಮಾಡದೆ ಪರವಾನಿಗೆ ಪಡೆಯದೆ ಅಕ್ರಮ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಲಾರಿ ಚಾಲಕ ಅನ್ಸರ್ ಎಂಬಾತನಲ್ಲಿ ಮರಳು ಸಾಗಾಟದ ಪರವಾನಿಗೆ ಹಾಗೂ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳಿಲ್ಲ ಎಂದಿದ್ದು ಅದರಂತೆ ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು ಮುಂದಿನ ಕ್ರಮಕ್ಕಾಗಿ ಗಣಿ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.
ತಪಾಸಣೆ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ, ಸಿಬ್ಬಂದಿಯಾದ ಪ್ರಶಾಂತ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!