ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಸಲು ಕೊನೆಯ ದಿನ ಜು.16 ರಂದು ಬಿಜೆಪಿ ಬೆಂಬಲಿತ, ಮಾಜಿ ಸೈನಿಕ ತಂಗಚ್ಚನ್ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾಣಾಧಿಕಾರಿಯಾಗಿ ವಿಲಾಸ್ ಕಾರ್ಯನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Leave a Comment

error: Content is protected !!