22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

ಶಿರ್ಲಾಲು: ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಶಿರ್ಲಾಲುವಿನ ರಾಜಶ್ರೀ ಜಗದೀಶ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ.

ಕ್ಯಾನ್ಸರ್ ಪೀಡಿತರಿಗೆ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ಕನಸು ಕಂಡಿದ್ದರು. ಇದೀಗ ಮಂಗಳೂರಿನ ಯುವಶಕ್ತಿ ಸೇವಾಪಥ ಸಂಸ್ಥೆಯ ಮೂಲಕ ಕ್ಯಾನ್ಸರ್ ಪೀಡಿತರ ನೆರವಿಗಿರುವ ಸಂಸ್ಥೆಯೊಂದಕ್ಕೆ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಎಲ್ಲರ ಗಮನ ಸಳೆಯುತ್ತಿದ್ದಾರೆ. ಬೆಳ್ತಂಗಡಿಯಲ್ಲಿ ಹೆಚ್ಚಿನ ಯುವ ಮನಸ್ಸುಗಳು ಇಂತಹ ಸೇವಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ರಾಜಶ್ರೀ ಅವರ ಅಭಿಪ್ರಾಯ: ನಾನು ಮಗುವಿನಂತೆ ಹಾರೈಕೆ ಮಾಡಿಕೊಂಡು ಬೆಳೆಸಿದ ತಲೆಕೂದಲನ್ನು ನನಗೆ ಮಗುವಾದಾಗ ಕ್ಯಾನ್ಸರ್ ಪೀಡಿತರಿಗೆ ನೀಡಬೇಕೆಂದು ಕನಸು ಕಂಡಿದ್ದೇನೆ. ಸಮಾಜದಲ್ಲಿ ಅಶಕ್ತರಿಗೆ ಸಹಾಯ ಮಾಡಲು ನಮ್ಮಲ್ಲಿ ಹಣ ಬೇಕೆಂದೇನೂ ಇಲ್ಲ ಈ ರೀತಿಯಾಗಿಯೂ ಸಮಾಜಸೇವೆ ಮಾಡಬಹುದು ಎಂಬುದು ನನ್ನ ಅಭಿಪ್ರಾಯ. ಇದಕ್ಕೆ ನನಗೆ ನನ್ನ ಪತಿ, ಅಪ್ಪ ಮತ್ತು ಅಣ್ಣಂದಿರ ಪೂರ್ಣ ಬೆಂಬಲದಿಂದ ಈ ಸಣ್ಣ ಪುಣ್ಯದ ಕಾರ್ಯವನ್ನು ಮಾಡುವಂತಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!