25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

ಶಿರ್ಲಾಲು: ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಶಿರ್ಲಾಲುವಿನ ರಾಜಶ್ರೀ ಜಗದೀಶ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ.

ಕ್ಯಾನ್ಸರ್ ಪೀಡಿತರಿಗೆ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ಕನಸು ಕಂಡಿದ್ದರು. ಇದೀಗ ಮಂಗಳೂರಿನ ಯುವಶಕ್ತಿ ಸೇವಾಪಥ ಸಂಸ್ಥೆಯ ಮೂಲಕ ಕ್ಯಾನ್ಸರ್ ಪೀಡಿತರ ನೆರವಿಗಿರುವ ಸಂಸ್ಥೆಯೊಂದಕ್ಕೆ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಎಲ್ಲರ ಗಮನ ಸಳೆಯುತ್ತಿದ್ದಾರೆ. ಬೆಳ್ತಂಗಡಿಯಲ್ಲಿ ಹೆಚ್ಚಿನ ಯುವ ಮನಸ್ಸುಗಳು ಇಂತಹ ಸೇವಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ರಾಜಶ್ರೀ ಅವರ ಅಭಿಪ್ರಾಯ: ನಾನು ಮಗುವಿನಂತೆ ಹಾರೈಕೆ ಮಾಡಿಕೊಂಡು ಬೆಳೆಸಿದ ತಲೆಕೂದಲನ್ನು ನನಗೆ ಮಗುವಾದಾಗ ಕ್ಯಾನ್ಸರ್ ಪೀಡಿತರಿಗೆ ನೀಡಬೇಕೆಂದು ಕನಸು ಕಂಡಿದ್ದೇನೆ. ಸಮಾಜದಲ್ಲಿ ಅಶಕ್ತರಿಗೆ ಸಹಾಯ ಮಾಡಲು ನಮ್ಮಲ್ಲಿ ಹಣ ಬೇಕೆಂದೇನೂ ಇಲ್ಲ ಈ ರೀತಿಯಾಗಿಯೂ ಸಮಾಜಸೇವೆ ಮಾಡಬಹುದು ಎಂಬುದು ನನ್ನ ಅಭಿಪ್ರಾಯ. ಇದಕ್ಕೆ ನನಗೆ ನನ್ನ ಪತಿ, ಅಪ್ಪ ಮತ್ತು ಅಣ್ಣಂದಿರ ಪೂರ್ಣ ಬೆಂಬಲದಿಂದ ಈ ಸಣ್ಣ ಪುಣ್ಯದ ಕಾರ್ಯವನ್ನು ಮಾಡುವಂತಾಯಿತು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya
error: Content is protected !!