ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆಯನ್ನು, ಬಡಕೋಡಿ ವಲಯ ಕಚೇರಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು. ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್, ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಕುಮಾರಿ, ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಶ್ರೀಮತಿ ಮಮತಾ ಸ್ವಾಗತಿಸಿ, ಶ್ರೀಮತಿ ಶಶಿಕಲಾ ವಂದಿಸಿದರು.

Leave a Comment

error: Content is protected !!