23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

ಬೆಳ್ತಂಗಡಿ: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ಜು.15 ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ.

ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ ನಡೆದಿದ್ದು ಈ ಘಟನೆ ಪತ್ರಿಕಾ ಸ್ವಾತಂತ್ರ‍್ಯಕ್ಕೆ ಧಕ್ಕೆ ತಂದಿದೆ. ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಬೆಳ್ತಂಗಡಿ ಪತ್ರಕರ್ತರ ಸಂಘದ ವತಿಯಿಂದ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಎಣಿಂಜೆ, ಕೋಶಾಧಿಕಾರಿ ತುಕರಾಮ್ ಬಿ, ಸದಸ್ಯರುಗಳಾದ ದೇವಿಪ್ರಸಾದ್, ಬಿ.ಎಸ್. ಕುಲಾಲ್, ಜಾರಪ್ಪ ಪೂಜಾರಿ, ಶಿಬಿ ಧರ್ಮಸ್ಥಳ, ಅಚುಶ್ರೀ ಬಾಂಗೇರು, ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು.

Related posts

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!