April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya
error: Content is protected !!