30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!