22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!