23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya
error: Content is protected !!