25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya
error: Content is protected !!