September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”
ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು ನಡೆಯಿತು.
ಬಹುಜನ ಚಳುವಳಿಯ ಹಿರಿಯ ಮುಖಂಡ ಅಣ್ಣು ಸಾಧನ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ರಘು ಧರ್ಮಸೇನ್ , ಮಾಜಿ ಜಿ.ಪಂ. ಸದಸ್ಯೆ ಸಿ.ಕೆ.ಚಂದ್ರಕಲಾ,
ರಾಜೀವ ಕಕ್ಕೆಪದವು ಮುಂತಾದವರು ಮಾತನಾಡಿ ಪಿ.ಡೀಕಯ್ಯರವರ ಚಳುವಳಿಯ ಮಹತ್ವದ ಘಟನೆಗಳನ್ನು ಮೆಲುಕು ಹಾಕಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕಿ ಡಾ.ಆಶಾಲತಾ ಪಿ., ಹಿರಿಯ ಮುಖಂಡರಾದ ಹೆಚ್.ಬಿ.ಮೋಹನ್, ಪದ್ಮನಾಭ ಅವರು ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳನ್ನು ನೆನಪಿಸಿಕೊಂಡು ಅವರ ಸೈದ್ಧಾಂತಿಕ ಆದರ್ಶಗಳನ್ನು ಅನುಸರಿಸಿದರೆ ಗೌರವ ಸಲ್ಲಿಸಿದಂತೆ ಎಂದು ಅಭಿಪ್ರಾಯಪಟ್ಟರು.

ಬಿ.ವಿ.ಎಫ್. ತಾಲೂಕು ಸಂಯೋಜಕ ಪ್ರಶಾಂತ್ , ನೀಲೇಶ್ ಪೆರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
ಪಿ.ಡೀಕಯ್ಯರವರ ನೇತೃತ್ವದ ಬಹುಜನ ಚಳುವಳಿಯಲ್ಲಿ ಗುರುತಿಸಿಕೊಂಡ ಹಿರಿಯ, ಕಿರಿಯ ಒಡನಾಡಿಗಳು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಂಡರು.

ಚಳುವಳಿಯ ಮುಖಂಡ ಶಿವಪ್ಪ ಗರ್ಡಾಡಿ ಕಾರ್ಯಕ್ರಮ ನಿರೂಪಿಸಿದರು. ಬಹುಜನ ಚಳುವಳಿಯ ಮುಖಂಡ ಶ್ರೀನಿವಾಸ್ ಪಿ.ಎಸ್. ವಂದಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya
error: Content is protected !!