22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ ಸಹಕಾರದಲ್ಲಿ ಗಿಡ ನಾಟಿ ಹಾಗೂ ಬಿತ್ತೋತ್ಸವ ನಡೆಸಲಾಯಿತು. ಜು.16 ರಂದು ನಡೆಯಿತು.

ಹತ್ತು ಬಗೆಯ ವಿವಿಧ ಹಣ್ಣುಗಳ 100 ಗಿಡಗಳ ನಾಟಿ ಹಾಗೂ 25,000ಕ್ಕೂ ಅಧಿಕ ಬೀಜಗಳನ್ನು ಬಿತ್ತಲಾಯಿತು.

ರೋಟರಿ ಜಿಲ್ಲಾ ಕಾರ್ಯದರ್ಶಿ (ತರಬೇತಿ) ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್, ಕುಲಸಚಿವರು ಶ್ರೀಕಾಂತ್ ಕಾಮತ್, ಧನಂಜಯ ರಾವ್, ಶ್ರೀಧರ್, ಪ್ರಕಾಶ್ ನಾರಾಯಣ್, ಕುಲಪತಿ ಡಾ. ರೋ. ಕಿರಣ್ ಹೆಬ್ಬಾರ್, ರೋ. ವಿವೇಕ್ ಸಂಪತ್ ಅರಿಗ, ರೋ. ನಾರಾಯಣ ಭಿಡೆ, ರೋ. ಉದಯಶಂಕರ್, ರೋ. ಅಬೂಬಕ್ಕರ್ & Anns, Annets, ರೋಟರಿ ಮಂಗಳೂರು ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು, ಅರಣ್ಯ ವೀಕ್ಷಕರು ಉಪಸ್ಥಿತರಿದ್ದರು.

150ಕ್ಕೂ ಅಧಿಕ ಭತ್ತದ ತಳಿಗಳ ಸಂರಕ್ಷಣೆ ಮಾಡಿರುವ ಹಿರಿಯ ಕೃಷಿಕ ಮಿತ್ತಬಾಗಿಲಿನ ದೇವರಾಜ್ ಬಿ.ಕೆ. ಅವರನ್ನು ಗೌರವಿಸಲಾಯಿತು.

Related posts

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya
error: Content is protected !!