25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ ಸಹಕಾರದಲ್ಲಿ ಗಿಡ ನಾಟಿ ಹಾಗೂ ಬಿತ್ತೋತ್ಸವ ನಡೆಸಲಾಯಿತು. ಜು.16 ರಂದು ನಡೆಯಿತು.

ಹತ್ತು ಬಗೆಯ ವಿವಿಧ ಹಣ್ಣುಗಳ 100 ಗಿಡಗಳ ನಾಟಿ ಹಾಗೂ 25,000ಕ್ಕೂ ಅಧಿಕ ಬೀಜಗಳನ್ನು ಬಿತ್ತಲಾಯಿತು.

ರೋಟರಿ ಜಿಲ್ಲಾ ಕಾರ್ಯದರ್ಶಿ (ತರಬೇತಿ) ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್, ಕುಲಸಚಿವರು ಶ್ರೀಕಾಂತ್ ಕಾಮತ್, ಧನಂಜಯ ರಾವ್, ಶ್ರೀಧರ್, ಪ್ರಕಾಶ್ ನಾರಾಯಣ್, ಕುಲಪತಿ ಡಾ. ರೋ. ಕಿರಣ್ ಹೆಬ್ಬಾರ್, ರೋ. ವಿವೇಕ್ ಸಂಪತ್ ಅರಿಗ, ರೋ. ನಾರಾಯಣ ಭಿಡೆ, ರೋ. ಉದಯಶಂಕರ್, ರೋ. ಅಬೂಬಕ್ಕರ್ & Anns, Annets, ರೋಟರಿ ಮಂಗಳೂರು ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು, ಅರಣ್ಯ ವೀಕ್ಷಕರು ಉಪಸ್ಥಿತರಿದ್ದರು.

150ಕ್ಕೂ ಅಧಿಕ ಭತ್ತದ ತಳಿಗಳ ಸಂರಕ್ಷಣೆ ಮಾಡಿರುವ ಹಿರಿಯ ಕೃಷಿಕ ಮಿತ್ತಬಾಗಿಲಿನ ದೇವರಾಜ್ ಬಿ.ಕೆ. ಅವರನ್ನು ಗೌರವಿಸಲಾಯಿತು.

Related posts

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya
error: Content is protected !!