23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ ಸಹಕಾರದಲ್ಲಿ ಗಿಡ ನಾಟಿ ಹಾಗೂ ಬಿತ್ತೋತ್ಸವ ನಡೆಸಲಾಯಿತು. ಜು.16 ರಂದು ನಡೆಯಿತು.

ಹತ್ತು ಬಗೆಯ ವಿವಿಧ ಹಣ್ಣುಗಳ 100 ಗಿಡಗಳ ನಾಟಿ ಹಾಗೂ 25,000ಕ್ಕೂ ಅಧಿಕ ಬೀಜಗಳನ್ನು ಬಿತ್ತಲಾಯಿತು.

ರೋಟರಿ ಜಿಲ್ಲಾ ಕಾರ್ಯದರ್ಶಿ (ತರಬೇತಿ) ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್, ಕುಲಸಚಿವರು ಶ್ರೀಕಾಂತ್ ಕಾಮತ್, ಧನಂಜಯ ರಾವ್, ಶ್ರೀಧರ್, ಪ್ರಕಾಶ್ ನಾರಾಯಣ್, ಕುಲಪತಿ ಡಾ. ರೋ. ಕಿರಣ್ ಹೆಬ್ಬಾರ್, ರೋ. ವಿವೇಕ್ ಸಂಪತ್ ಅರಿಗ, ರೋ. ನಾರಾಯಣ ಭಿಡೆ, ರೋ. ಉದಯಶಂಕರ್, ರೋ. ಅಬೂಬಕ್ಕರ್ & Anns, Annets, ರೋಟರಿ ಮಂಗಳೂರು ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು, ಅರಣ್ಯ ವೀಕ್ಷಕರು ಉಪಸ್ಥಿತರಿದ್ದರು.

150ಕ್ಕೂ ಅಧಿಕ ಭತ್ತದ ತಳಿಗಳ ಸಂರಕ್ಷಣೆ ಮಾಡಿರುವ ಹಿರಿಯ ಕೃಷಿಕ ಮಿತ್ತಬಾಗಿಲಿನ ದೇವರಾಜ್ ಬಿ.ಕೆ. ಅವರನ್ನು ಗೌರವಿಸಲಾಯಿತು.

Related posts

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya
error: Content is protected !!