27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ, ಕೆವಿಜಿ ದಂತ ಮಹಾ ವಿದ್ಯಾಲಯ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಉಜಿರೆ ಹಳೆಪೇಟೆ ಬದುರುಲ್ ಹುದಾ ಸೆಕೆಂಡರಿ ಮದರಸ ಸಭಾಂಗಣದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜು.16 ರಂದು ನಡೆಯಿತು.

ಜಮಾಅತ್ ಕೇಂದ್ರ ಕಮಿಟಿ ಕಾರ್ಯದರ್ಶಿ ಬಿ. ಮುಹಮ್ಮದ್ ಅವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಮಸೀದಿ ಖತೀಬ್ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ದುಃಆ ಕಾರ್ಯಕ್ರಮ ನೆರವೇರಿಸಿದರು. ಎಸ್‌ಎಮ್‌ಎ ರಾಜ್ಯಾಧ್ಯಕ್ಷ ಹಾಜಿ ಸಯ್ಯಿದ್ ಇಸ್ಮಾಯಿಲ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 1400 ವರ್ಷಗಳ ಹಿಂದೆಯೇ ಹಝ್ರತ್ ಪೈಗಂಬರರು ದಿನದಲ್ಲಿ ಐದು ಬಾರಿ ಬಾಯಿ ಸ್ವಚ್ಛಗೊಳಿಸಿಕೊಳ್ಳಲು ಹೇಳಿದ ವಚನವನ್ನು ಉದ್ಧರಿಸಿ ಇಂದಿನ ದಂತ ಚಿಕಿತ್ಸೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಕೇಂದ್ರ ಕಮಿಟಿ ಜೊತೆ ಕಾರ್ಯದರ್ಶಿ ಹನೀಫ್ ಟಿ.ಎಚ್, ಕಮಿಟಿಯ ಸದಸ್ಯ ಅಬೂಬಕ್ಕರ್ ಸುಪ್ರೀಂ ಶುಭಕೋರಿದರು.


ಕೆವಿಜಿ ದಂತ ಮಹಾ ವಿದ್ಯಾಲಯದ ವಿಭಾಗ ಮುಖ್ಯಸ್ಥ ಡಾ.ದಯಾಕರ್ ಎಂ. ಎಂ., ಅಲ್-ಅಮೀನ್ ಯೆಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಶಾಕೀರ್ ಹಾಗೂ ಪದಾಧಿಕಾರಿಗಳು ಮತ್ತು ಸಮಾಜ ಸೇವಕ ಸುಲೈಮಾನ್ ಬೆಳಾಲು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುಮಾರು ನೂರರಷ್ಟು ಜನ ದಂತದ ವಿವಿಧ ಬಗೆಯ ಉಚಿತ ಚಿಕಿತ್ಸೆಯನ್ನು ಪಡೆದುಕೊಂಡಿದ್ದು, 35 ಜನರಿಗೆ ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಆಸ್ಪತ್ರೆಗೆ ಆಯ್ಕೆ ಮಾಡಲಾಯಿತು. ಅವರಿಗೆ ಉಚಿತ ಬಸ್ಸು ವ್ಯವಸ್ಥೆ ಕಲ್ಲಿಸುವುದಾಗಿ ಪ್ರಕಟಿಸಲಾಯಿತು.

ಶಿಬಿರ ಸಂಯೋಜಿಸಿದ ಡಾ. ದಯಾಕರ್ ಎಂ.ಎಂ, ಮತ್ತು ಕೆವಿಜಿ ದಂತ ಮಹಾ ವಿದ್ಯಾಲಯದ ಪ್ರೊಫೆಸರ್ ಡಾ. ಅನಿತಾ ದಯಾಕರ್ ಅವರಿಗೆ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.

ಅಲ್ ಅಮೀನ್ ಯೆಂಗ್-ಮೆನ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಫಝಲ್ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya
error: Content is protected !!