July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಅನಿಲ್ ರಾವ್ ತಿಳಿಸಿದರು.

ಅವರು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಶಿಬಿರಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ಹರಿಪ್ರಸಾದ್, ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಶುಭ ಹಾರೈಸಿದರು. ಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್, ಆಡಳಿತಾಧಿಕಾರಿ ಡಾ. ಸಂಜತ್, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಲಯನ್ಸ್ ಕ್ಲಬ್ ಸದಸ್ಯರುಗಳು ಭಾಗವಹಿಸಿದ್ದರು.

125ಕ್ಕೂ ಹೆಚ್ಚು ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದರು. ಸುಲ್ಕೇರಿ ಲಯನ್ಸ್ ಕ್ಲಬ್ ಸದಸ್ಯ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಭಟ್ ಧನ್ಯವಾದವಿತ್ತರು.

Related posts

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!