24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಅನಿಲ್ ರಾವ್ ತಿಳಿಸಿದರು.

ಅವರು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಶಿಬಿರಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ಹರಿಪ್ರಸಾದ್, ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಶುಭ ಹಾರೈಸಿದರು. ಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್, ಆಡಳಿತಾಧಿಕಾರಿ ಡಾ. ಸಂಜತ್, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಲಯನ್ಸ್ ಕ್ಲಬ್ ಸದಸ್ಯರುಗಳು ಭಾಗವಹಿಸಿದ್ದರು.

125ಕ್ಕೂ ಹೆಚ್ಚು ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದರು. ಸುಲ್ಕೇರಿ ಲಯನ್ಸ್ ಕ್ಲಬ್ ಸದಸ್ಯ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಭಟ್ ಧನ್ಯವಾದವಿತ್ತರು.

Related posts

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!