23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಅನಿಲ್ ರಾವ್ ತಿಳಿಸಿದರು.

ಅವರು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಶಿಬಿರಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ಹರಿಪ್ರಸಾದ್, ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಶುಭ ಹಾರೈಸಿದರು. ಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್, ಆಡಳಿತಾಧಿಕಾರಿ ಡಾ. ಸಂಜತ್, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಲಯನ್ಸ್ ಕ್ಲಬ್ ಸದಸ್ಯರುಗಳು ಭಾಗವಹಿಸಿದ್ದರು.

125ಕ್ಕೂ ಹೆಚ್ಚು ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದರು. ಸುಲ್ಕೇರಿ ಲಯನ್ಸ್ ಕ್ಲಬ್ ಸದಸ್ಯ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಭಟ್ ಧನ್ಯವಾದವಿತ್ತರು.

Related posts

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya
error: Content is protected !!