ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Leave a Comment

error: Content is protected !!