23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Related posts

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya
error: Content is protected !!