23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya
error: Content is protected !!