23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!