24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಜು.16 ಮತ್ತು 17 ರಂದು ನಡೆದ ಮೀನು ಮೇಳಕ್ಕೆ ಆಗಮಿಸಿ ಮಾತನಾಡಿದರು.

ಈ ಮೇಳವನ್ನು ಈ ರಾಜ್ಯದ ದೇಶದ ಜನರು ವೀಕ್ಷಿಸಿದರೆ ಎಲ್ಲರಿಗೂ ಇದೊಂದು ಮಾದರಿ ಹಾಗೂ ಬದುಕಿಗೆ ಶಕ್ತಿಯಾಗುತ್ತದೆ, ಕಡಮ್ಮಾಜೆ ಫಾರ್ಮ್ಸ್ ಕೃಷಿಕರಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಿದೆ ಎಂದರು.


ಕಡಮ್ಮಾಜೆ ಮಾಲಕರಾದ ದೇವಿಪ್ರಸಾದ್ ಮತ್ತು ಜಯಪ್ರಸಾದ್ ಅವರ ಮನೆಯಲ್ಲಿ ಎರಡು ದಿನಗಳ ಮೀನುಮೇಳ ನಡೆಯಿತು. ಮೇಳದಲ್ಲಿ ಬಗೆ ಬಗೆಯ ಸಿಹಿ ಮೀನುಗಳಾದ ಮಡೆಂಜಿ ಮೀನು, ತಿಲಾಪಿಯಾ ಮೀನು, ಪಂಗಾಸಿಯಸ್ ಮೀನು ಮತ್ತು ವಿವಿಧ ರೀತಿಯ ಪಕ್ಷಿಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದ್ದರು. ಮೀನು ಮೇಳಕ್ಕೆ ಆಗಮಿಸಿದ ಜನರು ತಮಗೆ ಬೇಕಾದ ಮೀನನ್ನು ಖರೀದಿಸುವ ಮೂಲಕ ಉತ್ತಮ ಅವಕಾಶವನ್ನು ಬಳಸಿಕೊಂಡರು.

Related posts

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya
error: Content is protected !!