32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಜು.16 ಮತ್ತು 17 ರಂದು ನಡೆದ ಮೀನು ಮೇಳಕ್ಕೆ ಆಗಮಿಸಿ ಮಾತನಾಡಿದರು.

ಈ ಮೇಳವನ್ನು ಈ ರಾಜ್ಯದ ದೇಶದ ಜನರು ವೀಕ್ಷಿಸಿದರೆ ಎಲ್ಲರಿಗೂ ಇದೊಂದು ಮಾದರಿ ಹಾಗೂ ಬದುಕಿಗೆ ಶಕ್ತಿಯಾಗುತ್ತದೆ, ಕಡಮ್ಮಾಜೆ ಫಾರ್ಮ್ಸ್ ಕೃಷಿಕರಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಿದೆ ಎಂದರು.


ಕಡಮ್ಮಾಜೆ ಮಾಲಕರಾದ ದೇವಿಪ್ರಸಾದ್ ಮತ್ತು ಜಯಪ್ರಸಾದ್ ಅವರ ಮನೆಯಲ್ಲಿ ಎರಡು ದಿನಗಳ ಮೀನುಮೇಳ ನಡೆಯಿತು. ಮೇಳದಲ್ಲಿ ಬಗೆ ಬಗೆಯ ಸಿಹಿ ಮೀನುಗಳಾದ ಮಡೆಂಜಿ ಮೀನು, ತಿಲಾಪಿಯಾ ಮೀನು, ಪಂಗಾಸಿಯಸ್ ಮೀನು ಮತ್ತು ವಿವಿಧ ರೀತಿಯ ಪಕ್ಷಿಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದ್ದರು. ಮೀನು ಮೇಳಕ್ಕೆ ಆಗಮಿಸಿದ ಜನರು ತಮಗೆ ಬೇಕಾದ ಮೀನನ್ನು ಖರೀದಿಸುವ ಮೂಲಕ ಉತ್ತಮ ಅವಕಾಶವನ್ನು ಬಳಸಿಕೊಂಡರು.

Related posts

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya
error: Content is protected !!