22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಜು.16 ಮತ್ತು 17 ರಂದು ನಡೆದ ಮೀನು ಮೇಳಕ್ಕೆ ಆಗಮಿಸಿ ಮಾತನಾಡಿದರು.

ಈ ಮೇಳವನ್ನು ಈ ರಾಜ್ಯದ ದೇಶದ ಜನರು ವೀಕ್ಷಿಸಿದರೆ ಎಲ್ಲರಿಗೂ ಇದೊಂದು ಮಾದರಿ ಹಾಗೂ ಬದುಕಿಗೆ ಶಕ್ತಿಯಾಗುತ್ತದೆ, ಕಡಮ್ಮಾಜೆ ಫಾರ್ಮ್ಸ್ ಕೃಷಿಕರಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಿದೆ ಎಂದರು.


ಕಡಮ್ಮಾಜೆ ಮಾಲಕರಾದ ದೇವಿಪ್ರಸಾದ್ ಮತ್ತು ಜಯಪ್ರಸಾದ್ ಅವರ ಮನೆಯಲ್ಲಿ ಎರಡು ದಿನಗಳ ಮೀನುಮೇಳ ನಡೆಯಿತು. ಮೇಳದಲ್ಲಿ ಬಗೆ ಬಗೆಯ ಸಿಹಿ ಮೀನುಗಳಾದ ಮಡೆಂಜಿ ಮೀನು, ತಿಲಾಪಿಯಾ ಮೀನು, ಪಂಗಾಸಿಯಸ್ ಮೀನು ಮತ್ತು ವಿವಿಧ ರೀತಿಯ ಪಕ್ಷಿಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದ್ದರು. ಮೀನು ಮೇಳಕ್ಕೆ ಆಗಮಿಸಿದ ಜನರು ತಮಗೆ ಬೇಕಾದ ಮೀನನ್ನು ಖರೀದಿಸುವ ಮೂಲಕ ಉತ್ತಮ ಅವಕಾಶವನ್ನು ಬಳಸಿಕೊಂಡರು.

Related posts

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya
error: Content is protected !!