26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಜು.16 ಮತ್ತು 17 ರಂದು ನಡೆದ ಮೀನು ಮೇಳಕ್ಕೆ ಆಗಮಿಸಿ ಮಾತನಾಡಿದರು.

ಈ ಮೇಳವನ್ನು ಈ ರಾಜ್ಯದ ದೇಶದ ಜನರು ವೀಕ್ಷಿಸಿದರೆ ಎಲ್ಲರಿಗೂ ಇದೊಂದು ಮಾದರಿ ಹಾಗೂ ಬದುಕಿಗೆ ಶಕ್ತಿಯಾಗುತ್ತದೆ, ಕಡಮ್ಮಾಜೆ ಫಾರ್ಮ್ಸ್ ಕೃಷಿಕರಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಿದೆ ಎಂದರು.


ಕಡಮ್ಮಾಜೆ ಮಾಲಕರಾದ ದೇವಿಪ್ರಸಾದ್ ಮತ್ತು ಜಯಪ್ರಸಾದ್ ಅವರ ಮನೆಯಲ್ಲಿ ಎರಡು ದಿನಗಳ ಮೀನುಮೇಳ ನಡೆಯಿತು. ಮೇಳದಲ್ಲಿ ಬಗೆ ಬಗೆಯ ಸಿಹಿ ಮೀನುಗಳಾದ ಮಡೆಂಜಿ ಮೀನು, ತಿಲಾಪಿಯಾ ಮೀನು, ಪಂಗಾಸಿಯಸ್ ಮೀನು ಮತ್ತು ವಿವಿಧ ರೀತಿಯ ಪಕ್ಷಿಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದ್ದರು. ಮೀನು ಮೇಳಕ್ಕೆ ಆಗಮಿಸಿದ ಜನರು ತಮಗೆ ಬೇಕಾದ ಮೀನನ್ನು ಖರೀದಿಸುವ ಮೂಲಕ ಉತ್ತಮ ಅವಕಾಶವನ್ನು ಬಳಸಿಕೊಂಡರು.

Related posts

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya
error: Content is protected !!