23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಜು.16 ಮತ್ತು 17 ರಂದು ನಡೆದ ಮೀನು ಮೇಳಕ್ಕೆ ಆಗಮಿಸಿ ಮಾತನಾಡಿದರು.

ಈ ಮೇಳವನ್ನು ಈ ರಾಜ್ಯದ ದೇಶದ ಜನರು ವೀಕ್ಷಿಸಿದರೆ ಎಲ್ಲರಿಗೂ ಇದೊಂದು ಮಾದರಿ ಹಾಗೂ ಬದುಕಿಗೆ ಶಕ್ತಿಯಾಗುತ್ತದೆ, ಕಡಮ್ಮಾಜೆ ಫಾರ್ಮ್ಸ್ ಕೃಷಿಕರಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಿದೆ ಎಂದರು.


ಕಡಮ್ಮಾಜೆ ಮಾಲಕರಾದ ದೇವಿಪ್ರಸಾದ್ ಮತ್ತು ಜಯಪ್ರಸಾದ್ ಅವರ ಮನೆಯಲ್ಲಿ ಎರಡು ದಿನಗಳ ಮೀನುಮೇಳ ನಡೆಯಿತು. ಮೇಳದಲ್ಲಿ ಬಗೆ ಬಗೆಯ ಸಿಹಿ ಮೀನುಗಳಾದ ಮಡೆಂಜಿ ಮೀನು, ತಿಲಾಪಿಯಾ ಮೀನು, ಪಂಗಾಸಿಯಸ್ ಮೀನು ಮತ್ತು ವಿವಿಧ ರೀತಿಯ ಪಕ್ಷಿಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಿದ್ದರು. ಮೀನು ಮೇಳಕ್ಕೆ ಆಗಮಿಸಿದ ಜನರು ತಮಗೆ ಬೇಕಾದ ಮೀನನ್ನು ಖರೀದಿಸುವ ಮೂಲಕ ಉತ್ತಮ ಅವಕಾಶವನ್ನು ಬಳಸಿಕೊಂಡರು.

Related posts

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya
error: Content is protected !!