ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕರಿಮಣೇಲು: ದೇಲಂಪುರಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ಅಗತ್ಯಕ್ಕಾಗಿ ಕೆಲವು ಮರಗಳನ್ನು ಕಡಿದ ಪ್ರಾಯಶ್ಚಿತ್ತಕ್ಕಾಗಿ ದೇವಸ್ಥಾನದ ಸ್ಥಳದಲ್ಲಿ ಹಲಸು , ಹೆಬ್ಬಲಸು ಮುಂತಾದ ಹಲವಾರು ಉಪಯುಕ್ತ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ಘಟಕದ ಸದಸ್ಯರು ಹಾಗೂ ದೇಲಂಪುರಿ ಗೆಳೆಯರ ಬಳಗದ ಹಲವಾರು ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ , ಉಸ್ತುವಾರಿ ವಹಿಸಿದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಕೆ ಸಹಕರಿಸಿದರು.

Leave a Comment

error: Content is protected !!