April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಪರಾಗ್ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಪ್ರವೀಣ್ ಮುಗುಳಿ ವಿಟ್ಲ, ಕಾರ್ಯದರ್ಶಿಯಾಗಿ ಶೈಲಾ ರಮೇಶ್ ಬೆಳ್ತಂಗಡಿ, ಖಜಾಂಚಿಯಾಗಿ ಮೋಹಿತ್ ಕುಮಾರ್ ಗೌಡ ಕೊಳಿಗೆ ಪುತ್ತೂರು, ಉಪಾಧ್ಯಕ್ಷರಾಗಿ ಸಂಧ್ಯಾ ಪ್ರಭು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಪದ್ಯಾಣ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶೈಲಾ ರಮೇಶ್ ಅವರು ಮೂಲತಃ ಮಂಗಳೂರು ಉಳ್ಳಾಲದ ಸೋಮೇಶ್ವರ ನಿವಾಸಿಯಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ನಾವೂರು ಇಂಚರ ನಿವಾಸಿಯಾಗಿದ್ದಾರೆ. ಎಸ್‌ಡಿಎಂ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ಬೆಂಗಳೂರಿನಲ್ಲಿ ಹೈಕೋರ್ಟ್‌ ವಕೀಲರಾಗಿದ್ದು ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

Related posts

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya
error: Content is protected !!