23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಪರಾಗ್ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಪ್ರವೀಣ್ ಮುಗುಳಿ ವಿಟ್ಲ, ಕಾರ್ಯದರ್ಶಿಯಾಗಿ ಶೈಲಾ ರಮೇಶ್ ಬೆಳ್ತಂಗಡಿ, ಖಜಾಂಚಿಯಾಗಿ ಮೋಹಿತ್ ಕುಮಾರ್ ಗೌಡ ಕೊಳಿಗೆ ಪುತ್ತೂರು, ಉಪಾಧ್ಯಕ್ಷರಾಗಿ ಸಂಧ್ಯಾ ಪ್ರಭು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಪದ್ಯಾಣ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶೈಲಾ ರಮೇಶ್ ಅವರು ಮೂಲತಃ ಮಂಗಳೂರು ಉಳ್ಳಾಲದ ಸೋಮೇಶ್ವರ ನಿವಾಸಿಯಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ನಾವೂರು ಇಂಚರ ನಿವಾಸಿಯಾಗಿದ್ದಾರೆ. ಎಸ್‌ಡಿಎಂ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ಬೆಂಗಳೂರಿನಲ್ಲಿ ಹೈಕೋರ್ಟ್‌ ವಕೀಲರಾಗಿದ್ದು ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya
error: Content is protected !!